September 20, 2024

 

ಸಚ್ಚರಿಪೇಟೆಯ ಮುಂಡೇರಿ ಕೃಷ್ಣಭಂಡಾರಿಯವರ ಧರ್ಮಪತ್ನಿ ಶ್ರೀಮತಿ ಲಲಿತ ಭಂಡಾರಿಯವರು ಇಂದು ಮಧ್ಯಾಹ್ನ ನಿಧನ ಹೊಂದಿದ್ದಾರೆ.  ಅವರಿಗೆ ಸುಮಾರು ಅರವತ್ತು ವರ್ಷ ವಯಸ್ಸಾಗಿತ್ತು. ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಣಿಪಾಲದಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರೂ ಇಂದು ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತಕ್ಕೊಳಗಾಗಿ ನಿಧನ ಹೊಂದಿದ್ದಾರೆ.  ಅವರು ಪತಿ,ಮಕ್ಕಳಾದ ಕವಿತ, ಸುನಿಲ್, ಸುಧೀರ್ ಮತ್ತು ಸುಭಾಷ್ ಹಾಗೂ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.
ಅವರ ಪತಿ,ಮಕ್ಕಳು ಹಾಗೂ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ.

ಅಗಲಿದ ಆತ್ಮಕ್ಕೆ ದೇವರು ಚಿರಶಾಂತಿಯನ್ನು ದಯಪಾಲಿಸಲಿ ಎಂಬುದು ಭಂಡಾರಿವಾರ್ತೆ ಯ ಆಶಯ.

Leave a Reply

Your email address will not be published. Required fields are marked *