September 20, 2024

ವಿಟ್ಲದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರ ಹರ್ಷಿತ್ ಹರೀಶ್ ಭಂಡಾರಿ. ಇವರು ಶಾಲೆಯಲ್ಲಿ ಆಯೋಜಿಸಿದ ಛದ್ಮವೇಷ ಸ್ಪರ್ಧೆಯಲ್ಲಿ ಶ್ರವಣ ಕುಮಾರನ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ದ್ವಿತೀಯ ಬಹುಮಾನ ಪಡೆದಿರುತ್ತಾರೆ.

ಇವರು ಮಂಗಳೂರಿನ ಇನ್ಫೋಸಿಸ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಹರೀಶ್ ಭಂಡಾರಿ ಮತ್ತು ಶ್ರೀಮತಿ ಶಾಂತಲಾಹರೀಶ್ ಭಂಡಾರಿ ದಂಪತಿಗಳ ಸುಪುತ್ರ.

ಭಂಡಾರಿ ಕುಟುಂಬದ ಪ್ರತಿಭಾವಂತ ಹರ್ಷಿತ್ ಗೆ ಭಗವಂತನು ಆಯುರಾರೋಗ್ಯ ಭಾಗ್ಯ ನೀಡಲಿ, ಭವಿಷ್ಯದಲ್ಲಿ ಇನ್ನಷ್ಟು ಸಾಧನೆ ಮಾಡಲಿ ಎಂದು ಭಂಡಾರಿ ಕುಟುಂಬದ ಮನೆಮನದ ಮಾತು ಭಂಡಾರಿವಾರ್ತೆ ಶುಭ ಹಾರೈಸುತ್ತದೆ.

ವರದಿ:ಭಾಸ್ಕರ್ ಭಂಡಾರಿ ಶಿರಾಳಕೊಪ್ಪ.

Leave a Reply

Your email address will not be published. Required fields are marked *