September 20, 2024

ಬಂಟ್ವಾಳ ಬೈಪಾಸ್ ರಸ್ತೆಯ ಅಜೆಕಲ ಶ್ರೀ ಬಾಬು ಭಂಡಾರಿಯವರ ಧರ್ಮಪತ್ನಿ ಶ್ರೀಮತಿ ಚಂದ್ರಾವತಿ ಬಾಬು ಭಂಡಾರಿಯವರು ಅನಾರೋಗ್ಯದ ನಿಮಿತ್ತ ತಮ್ಮ ಜೀವನದ ಅಂತಿಮ ಯಾತ್ರೆಯನ್ನು ಫೆಬ್ರವರಿ 17 ರ ಶನಿವಾರದಂದು ಕೈಗೊಂಡರು. ಅವರಿಗೆ 57 ವರ್ಷ ವಯಸ್ಸಾಗಿತ್ತು.

ಬಂಟ್ವಾಳ ತಾಲ್ಲೂಕಿನ ಅಜೆಕಲ ಗ್ರಾಮದವರಾದ ಇವರು ಅಮ್ಟಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿ ಸತತ ನಾಲ್ಕು ಬಾರಿ ಆಯ್ಕೆಯಾಗಿದ್ದರು.  ಹಾಲಿ ಸದಸ್ಯೆಯಾಗಿಯೂ ಕಾರ್ಯ ನಿರ್ವಹಿಸುತ್ತಿದ್ದ ಇವರು ತಮ್ಮ ವಾರ್ಡಿನ ಅಭಿವೃದ್ಧಿಗಾಗಿ ಶಕ್ತಿ ಮೀರಿ ಕೆಲಸ ಮಾಡಿ ಹೆಚ್ಚಿನ ಅನುದಾನಗಳನ್ನು ತಂದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಬಂಟ್ವಾಳ ಭಂಡಾರಿ ಸಮಾಜ ಸಂಘದ ನೇತ್ರಾವತಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದರು. ಬಂಟ್ವಾಳ ಭಂಡಾರಿ ಸಮಾಜ ಸಂಘದ ಅಭಿವೃದ್ಧಿ ಹಾಗೂ ಸಂಘಟನೆ ಕೆಲಸಗಳಲ್ಲಿ ಕಳೆದ 26 ವರ್ಷಗಳಿಂದ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಇವರ ಪತಿ ಶ್ರೀ ಬಾಬು ಭಂಡಾರಿಯವರು ಅಜೆಕಲ ಬಂಟ್ವಾಳ ಭಂಡಾರಿ ಸಮಾಜ ಸಂಘದ ಗೌರವಾಧ್ಯಕ್ಷರಾಗಿದ್ದಾರೆ.

 

ಶ್ರೀಮತಿ ಚಂದ್ರಾವತಿ ಬಾಬು ಭಂಡಾರಿಯವರು ದೂರದ ಕುವೈಟ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿರುವ ಪುತ್ರ ಸಚಿನ್ ಭಂಡಾರಿ ಹಾಗೂ ಇನ್ನೊಬ್ಬ ಮಗ ಸೋಹನ್ ಭಂಡಾರಿ ಹಾಗೂ ಅಪಾರ ಬಂಧುವರ್ಗದವರನ್ನು ಅಗಲಿದ್ದಾರೆ. ಇವರ ನಿಧನಕ್ಕೆಬಂಟ್ವಾಳ ಭಂಡಾರಿ ಸಮಾಜ ಸಂಘದ ಅಧ್ಯಕ್ಷರು, ಯುವ ವೇದಿಕೆಯ ಅಧ್ಯಕ್ಷರು ಹಾಗೂ ನೇತ್ರಾವತಿ ಮಹಿಳಾ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇವರ ಅಂತ್ಯಕ್ರಿಯೆಯು ಫೆಬ್ರವರಿ 18 ರ ಆದಿತ್ಯವಾರ ಮುಂಜಾನೆ 9.30 ಗಂಟೆಗೆ ಅಜೆಕಲದಲ್ಲಿ ಜರುಗಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.

ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿ ಕರುಣಿಸಲಿ ಮತ್ತು ದುಃಖತಪ್ತ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಭಂಡಾರಿ ಕುಟುಂಬದ ಮನೆಮನದ ಮಾತು ಭಂಡಾರಿವಾರ್ತೆ ಪ್ರಾರ್ಥಿಸುತ್ತದೆ.

 

ಭಂಡಾರಿವಾರ್ತೆ.

Leave a Reply

Your email address will not be published. Required fields are marked *