September 20, 2024

ಮಂಗಳೂರು ಭಂಡಾರಿ ಸಮಾಜ ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಭಂಡಾರಿ ಮಣ್ಣಗುಡ್ಡೆ ಮತ್ತು ಶ್ರೀಮತಿ ವರಲಕ್ಷ್ಮಿ ನಾಗೇಶ್ ಭಂಡಾರಿ ದಂಪತಿಯು ಸೆಪ್ಟೆಂಬರ್ 7 ರ ಶುಕ್ರವಾರ ತಮ್ಮ ವೈವಾಹಿಕ ಜೀವನದ ಇಪ್ಪತ್ತನಾಲ್ಕನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದಾರೆ.


ಶ್ರೀ ನಾಗೇಶ್ ಭಂಡಾರಿಯವರು ಮಂಗಳೂರು ಕೆಮಿಕಲ್ಸ್ ಆಂಡ್ ಫರ್ಟಿಲೈಸರ್ಸ್ ನಲ್ಲಿ ಸೀನಿಯರ್ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದು ಮಂಗಳೂರು ಭಂಡಾರಿ ಸಮಾಜ ಸಂಘದ ಅಧ್ಯಕ್ಷರಾಗಿ, ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಸಮಿತಿಯ ಸದಸ್ಯರಾಗಿ, ಹಲವಾರು ಸಂಘ ಸಂಸ್ಥೆಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಶ್ರೀಮತಿ ವರಲಕ್ಷ್ಮಿ ನಾಗೇಶ್ ಭಂಡಾರಿಯವರು ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು ತಮ್ಮ ಪತಿಯಂತೆ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯರಾಗಿದ್ದಾರೆ.


ವಿವಾಹ ವಾರ್ಷಿಕೋತ್ಸವದ ಈ ಸುಸಂದರ್ಭದಲ್ಲಿ ಅವರಿಗೆ ಅವರ ಮಕ್ಕಳಾದ ಕುಮಾರಿ ಎಂ.ಪ್ರಜ್ಞಾ ಭಂಡಾರಿ ಮತ್ತು ಕುಮಾರಿ ಎಂ.ಪೂಜಾ ಭಂಡಾರಿ, ಕುಟುಂಬ ವರ್ಗದವರು, ಸ್ನೇಹಿತರು, ಆತ್ಮೀಯರು ಶುಭ ಕೋರುತ್ತಿದ್ದಾರೆ.
ನಾಗೇಶ್ ಭಂಡಾರಿ ದಂಪತಿಯು ತಮ್ಮ ದಾಂಪತ್ಯ ಜೀವನದ ಇಪ್ಪತ್ತನಾಲ್ಕು ವಸಂತಗಳನ್ನು ಪೂರೈಸಿ ಬೆಳ್ಳಿಹಬ್ಬಕ್ಕೆ ಪಾದಾರ್ಪಣೆ ಮಾಡುತ್ತಿರುವ ಈ ಶುಭ ಗಳಿಗೆಯಲ್ಲಿ ಶ್ರೀ ದೇವರು ಅವರಿಗೆ ಆಯುರಾರೋಗ್ಯ,ಐಶ್ವರ್ಯಗಳನ್ನು ನೀಡಿ, ಸುಖ-ಶಾಂತಿ ನೆಮ್ಮದಿಯುತ ಜೀವನವನ್ನು ದಯಪಾಲಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು “ಭಂಡಾರಿವಾರ್ತೆ” ಹೃದಯಪೂರ್ವಕವಾಗಿ ಶುಭ ಕೋರುತ್ತದೆ.

 

 

-ಭಂಡಾರಿವಾರ್ತೆ.

Leave a Reply

Your email address will not be published. Required fields are marked *