September 20, 2024

ಶ್ರೀಮತಿ ರಜಿತಾ ಪ್ರದೀಪ್ ಪಲಿಮಾರು ಮತ್ತು ಶ್ರೀ ಪ್ರದೀಪ್ ಪಲಿಮಾರು ದಂಪತಿ ಅಕ್ಟೋಬರ್ 9 ರ ಮಂಗಳವಾರ ತಮ್ಮ ಏಳನೇ ವರ್ಷದ ಮದುವೆ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಶ್ರೀ ಪ್ರದೀಪ್ ಪಲಿಮಾರು ಭಂಡಾರಿ ಸಮಾಜ ಸಂಘ ಬೆಂಗಳೂರು ವಲಯದ ಸಂಘಟನಾ ಕಾರ್ಯದರ್ಶಿಯಾಗಿದ್ದು , ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉದ್ಯೋಗಿಯಾಗಿದ್ದಾರೆ .

ಈ ಸಂದರ್ಭದಲ್ಲಿ ದಂಪತಿಗೆ ಮಗಳು ಧನ್ವಿ, ಕುಟುಂಬಸ್ಥರು ,ಹಿತೈಷಿಗಳು , ಬಂಧುಮಿತ್ರರು ಶುಭ ಹಾರೈಸಿದ್ದಾರೆ

ತಮ್ಮ ಮದುವೆಯ ಆರು ವರ್ಷಗಳನ್ನು ಪೂರೈಸಿ ಏಳನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ದಂಪತಿಗೆ ಭಗವಂತನು ಆಯುರಾರೋಗ್ಯವನ್ನು ದಯಪಾಲಿಸಿ ಉಜ್ವಲ ಭವಿಷ್ಯವನ್ನು ಕರುಣಿಸಿ ಆಶೀರ್ವದಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು “ಭಂಡಾರಿವಾರ್ತೆ” ಹಾರ್ದಿಕವಾಗಿ ಶುಭ ಕೋರುತ್ತದೆ.

  • ಭಂಡಾರಿವಾರ್ತೆ

Leave a Reply

Your email address will not be published. Required fields are marked *