
ಬಂಟ್ವಾಳ ತಾಲೂಕು ಕಲ್ಲಡ್ಕ ಕೊಳಕ್ತೀರು ದಿ.ಶ್ರೀ ಕೃಷ್ಣ ಭಂಡಾರಿ ಮತ್ತು ಶ್ರೀಮತಿ ಕಮಲಾಕ್ಷಿ ದಂಪತಿಯ ಪುತ್ರ ಡಾ॥ ಪ್ರಶಾಂತ್ ಕುಮಾರ್ ಕಲ್ಲಡ್ಕ ಅವರು 2018 ನೇ ಸಾಲಿನ ಮಾಸ್ಟರ್ ಇನ್ ಡೆಂಟಲ್ ಸಜ೯ರಿ ಪರೀಕ್ಷೆ ಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇವರು ಮಂಗಳೂರಿನ ಹೆಸರಾಂತ ದಂತ ವೈದ್ಯಕೀಯ ಕಾಲೇಜ್ ಎ.ಜೆ.ಶೆಟ್ಟಿ ಡೆಂಟಲ್ ಕಾಲೇಜಿನಲ್ಲಿ ಎಮ್ .ಡಿ.ಎಸ್ ಪದವಿಯನ್ನು ಪಡೆದಿದ್ದಾರೆ. ಬಾಯಿ ರೋಗ ಪತ್ತೆ ಶಾಸ್ತ್ರ ವಿಭಾಗ ದಲ್ಲಿ ವಿಶ್ವ ವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಎ.ಜೆ ದಂತ ವೈದ್ಯಕೀಯ ಮಹಾ ವಿದ್ಯಾಲಯ ಆಡಳಿತ ಮಂಡಳಿ ಮತ್ತು ಅಧ್ಯಾಪಕ ವೃಂದದ ಪ್ರಶಂಸೆಗೆ ಪಾತ್ರರಾಗಿದ್ದಾರೆ.


ವ್ಖತ್ತಿ ಜೀವನದಲ್ಲಿ ಶ್ರೇಷ್ಠ ಸಾಧನೆ ಮಾಡುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು ಭಂಡಾರಿ ವಾತೆ೯ಯ ಶುಭ ಹಾರೈಕೆ.
-ಭಂಡಾರಿ ವಾತೆ೯