September 20, 2024

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಶ್ರೀ ಪ್ರಸಾದ್ ಕುಮಾರ್ ಭಂಡಾರಿ ಮತ್ತು ಶ್ರೀಮತಿ ಶಾಲಿನಿ ಪ್ರಸಾದ್ ಭಂಡಾರಿಯವರ ಪುತ್ರ ಅಮನ್ ಪ್ರಿಯಾಂಶ್ ಭಂಡಾರಿ ಇವರು 2021-22 ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 609 (97.44%) ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಅಮನ್ ಪ್ರಿಯಾಂಶ್ ಭಂಡಾರಿ ಇವರು ಮೂಡುಬಿದಿರೆ ಆಳ್ವಾಸ್ ಇಂಗ್ಲಿಷ್ ಮಿಡಿಯಮ್ ಹೈಸ್ಕೂಲು ವಿದ್ಯಾರ್ಥಿ . ಅಮನ್ ಪ್ರಿಯಾಂಶ್ ಭಂಡಾರಿ ಇವರು ಶಿಕ್ಷಣದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

Leave a Reply

Your email address will not be published. Required fields are marked *