September 20, 2024

ಏಪ್ರಿಲ್ 3 ರ ಮಂಗಳವಾರ ಬೆಂಗಳೂರಿನಲ್ಲಿ ಕುಮಾರಿ ಶ್ರುತಿಕಾ ಭಂಡಾರಿಯವರು ತಮ್ಮ ಹುಟ್ಟು ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದಾರೆ.


ಬೆಂಗಳೂರಿನ ಪ್ರತಿಷ್ಠಿತ ಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿ ಇಂಜಿನಿಯರಿಂಗ್ ಕಲಿಯುತ್ತಿರುವ ಇವರು ಕುಂದಾಪುರ ತಾಲೂಕಿನ ಸಿದ್ದಾಪುರದ ಕಡ್ರಿ ಮೂಲದವರಾದ ಶ್ರೀ ಚಂದ್ರ ಭಂಡಾರಿ ಮತ್ತು ಉಡುಪಿ ಬನ್ನಂಜೆಯ ಶ್ರೀಮತಿ ಗೀತಾ ಚಂದ್ರ ಭಂಡಾರಿ ದಂಪತಿಗಳ ಮುದ್ದಿನ ಮಗಳು. ಇವರು ನಮ್ಮ ಭಂಡಾರಿವಾರ್ತೆಯ ಸಂಪಾದಕೀಯ ಮಂಡಳಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.


ಈ ಶುಭ ಸಂದರ್ಭದಲ್ಲಿ ಅವರಿಗೆ ಅವರ ತಂದೆ , ತಾಯಿ, ಕುಟುಂಬಸ್ಥರು, ಸ್ನೇಹಿತರು ಹಾಗೂ ಹಿತೈಷಿಗಳು ಶುಭ ಕೋರುತ್ತಿದ್ದಾರೆ.
ಕುಮಾರಿ ಶ್ರುತಿಕಾರವರು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಈ ಶುಭ ಗಳಿಗೆಯಲ್ಲಿ ಭಗವಂತನು ಅವರಿಗೆ ಆಯುರಾರೋಗ್ಯ ಐಶ್ವರ್ಯಗಳನ್ನು ನೀಡಿ ಹರಸಲಿ,ಭವಿಷ್ಯದಲ್ಲಿ ಅವರ ಎಲ್ಲಾ ಕನಸುಗಳು ನನಸಾಗಲಿ ಎಂದು ಭಂಡಾರಿ ಕುಟುಂಬದ ಮನೆಮನದ ಮಾತು ಭಂಡಾರಿವಾರ್ತೆ ಶುಭ ಹಾರೈಸುತ್ತಾ, ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರುತ್ತದೆ.

 

-ಭಂಡಾರಿವಾರ್ತೆ

Leave a Reply

Your email address will not be published. Required fields are marked *