September 20, 2024

ಭಂಡಾರಿ ಸಮಾಜ ಬೆಂಗಳೂರು ವಲಯದ ಸಕ್ರಿಯ ಮುಖಂಡ, ಮಾಜಿ ಅಧ್ಯಕ್ಷರೂ ಹಾಗೂ ಹಾಲಿ ಗೌರವಾಧ್ಯಕ್ಷರಾಗಿರುವ ಶ್ರೀ ಲಕ್ಷ್ಮಣ್ ಕರಾವಳಿ ಮತ್ತು ಬೆಂಗಳೂರಿನ ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿರುವ ಶ್ರೀಮತಿ ಡಾ . ಸುಮತಿ ಲಕ್ಷ್ಮಣ್ ಕರಾವಳಿಯವರು ತಮ್ಮ ವೈವಾಹಿಕ ಜೀವನದ ರಜತ ಮಹೋತ್ಸವವನ್ನು ಅಕ್ಟೋಬರ್ 21 ನೇ ಗುರುವಾರದಂದು ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದಾರೆ.

ಉಡುಪಿ ಕಾಡಬೆಟ್ಟು ದಿವಂಗತ ಗಿರಿಜಾ ವೆಂಕಪ್ಪ ಭಂಡಾರಿ ಮತ್ತು ದಿವಂಗತ ವೆಂಕಪ್ಪ ಭಂಡಾರಿಯವರ ಮಗ ಲಕ್ಷ್ಮಣ್ ಕರಾವಳಿ ಹಾಗೂ ಸಾಗರ ಶ್ರೀಮತಿ ರಾಜಮ್ಮ ಮತ್ತು ಶ್ರೀ ಮಹದೇವಪ್ಪದಂಪತಿಯ ಮಗಳಾಗಿರುವ ಶ್ರೀಮತಿ ಡಾ॥ ಸುಮತಿ ಲಕ್ಷ್ಮಣ್ ಕರಾವಳಿ ಯವರು 1996 ರ ಅಕ್ಟೋಬರ್ 21 ರಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಮೆಮೋರಿಯಲ್ ಹಾಲ್ ನಲ್ಲಿ ಸಪ್ತಪದಿ ತುಳಿದಿದ್ದರು.


ಲಕ್ಷ್ಮಣ್ ಕರಾವಳಿ ಯವರು ಬೆಂಗಳೂರಿನ ಮಾರತಹಳ್ಳಿಯಲ್ಲಿ ಇರುವ ಕರಾವಳಿ ಕೇಬಲ್& ಇಂಟರ್ನೆಟ್ ಸರ್ವಿಸಸ್ ಇದರ ಮಾಲಕರು ಮತ್ತು ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಸೇವಾ ಟ್ರಸ್ಟಿನ ಉಪಾಧ್ಯಕ್ಷರಾಗಿದ್ದರು ,ಬೆಂಗಳೂರು ಭಂಡಾರಿ ಸಮಾಜ ಸಂಘದ ಮಾಜಿ ಅಧ್ಯಕ್ಷರು ಹಾಗೂ ಸಂಘದ ಹಾಲಿ ಗೌರವ ಅಧ್ಯಕ್ಷರಾಗಿರುತ್ತಾರೆ .


ಡಾ . ಸುಮತಿ ಲಕ್ಷ್ಮಣ್ ಕರಾವಳಿಯವರು ಬೆಂಗಳೂರಿನ ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸಿಕೊಂಡು ತನ್ನ ಸೇವಾವಧಿಯಲ್ಲಿ ಹಲವಾರು ಪ್ರಶಸ್ತಿ, ಪುರಸ್ಕಾರಗಳನ್ನು ಪಡೆದಿರುತ್ತಾರೆ.


ಇವರ ಪುತ್ರರಾದ ಡಾ॥ ಹರ್ಷಿತ್ ಎಲ್. ಭಂಡಾರಿ ಧಾರವಾಡ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಎಂ.ಬಿ.ಬಿ.ಎಸ್. ಪದವಿಯನ್ನು ಅತ್ಯುತ್ತಮ ಅಂಕದೊಂದಿಗೆ ಪಡೆದು ಪ್ರಸ್ತುತ ವೈದ್ಯಕೀಯ ತರಬೇತಿಯನ್ನು ಪಡೆಯುತ್ತಿದ್ದಾರೆ . ಆದಿತ್ಯ ಎಲ್. ಭಂಡಾರಿಯವರು ಬೆಂಗಳೂರಿನ ಸಿ. ಎಂ.ಆರ್.ಐ ಟಿ ಇಂಜಿನಿಯರಿಂಗ್ ವಿದ್ಯಾಸಂಸ್ಥೆಯಲ್ಲಿ ಪ್ರಥಮ ವರ್ಷದ ಬಿ .ಇ. ವ್ಯಾಸಂಗ ಮಾಡುತ್ತಿದ್ದಾರೆ .

 

ದಂಪತಿಗೆ ಕಚ್ಚೂರು ಶ್ರೀ ನಾಗೇಶ್ವರ ದೇವರು ಆಯುರಾರೋಗ್ಯ ಅಷ್ಟಐಶ್ವರ್ಯವನ್ನು ಕರುಣಿಸಿ ಇನ್ನಷ್ಟು ಸಮಾಜ ಸೇವೆಯನ್ನು ಮಾಡುವಲ್ಲಿ ಅವರನ್ನು ಪ್ರೇರೇಪಿಸಿಕೊಂಡು ಇಡೀ ಸಮಾಜಕ್ಕೆ ಕೀರ್ತಿಯನ್ನು ತರಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು ಭಂಡಾರಿ ವಾರ್ತೆ ಈ ಸಂದರ್ಭದಲ್ಲಿ ಶುಭ ಹಾರೈಸಿಕೊಂಡು ಅಭಿನಂದನೆ ಸಲ್ಲಿಸುತ್ತಿದೆ.

Leave a Reply

Your email address will not be published. Required fields are marked *