September 20, 2024

ಚಿಕ್ಕಮಗಳೂರು ತಾಲೂಕಿನ ಮೂಡಿಗೆರೆ ಸಮೀಪದ ಗೌಡಹಳ್ಳಿಯ ಸತೀಶ್ ಭಂಡಾರಿಯವರು ದೀರ್ಘ ಕಾಲದ ಅಸೌಖ್ಯದಿಂದ ಡಿಸೆಂಬರ್ 4 ರ ಶನಿವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನ ಹೊಂದಿದರು. ಅವರಿಗೆ ಸುಮಾರು 53 ವರ್ಷ ವಯಸ್ಸಾಗಿತ್ತು.


ಸತೀಶ್ ಭಂಡಾರಿಯವರು ಸಾಮಾಜಿಕ ಸೇವೆಯಲ್ಲಿ ಆಸಕ್ತಿ ಹೊಂದಿದ್ದು ಭಂಡಾರಿ ಸಮಾಜ ಹಾಗೂ ಸವಿತಾ ಸಮಾಜದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಸತೀಶ್ ಭಂಡಾರಿ ಪತ್ನಿ, ಓರ್ವ ಪುತ್ರ ಹಾಗೂ ಒಬ್ಬರು ಪುತ್ರಿ ಹಾಗೂ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ .
ದಿವಂಗತರ ಅಂತ್ಯಸಂಸ್ಕಾರವು ಡಿಸೆಂಬರ್ 5 ರ ಭಾನುವಾರ ಸಂಜೆ ಮೂಡಿಗೆರೆಯಲ್ಲಿ ನಡೆಯಲಿದೆಯೆಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಕುಟುಂಬಕ್ಕೆ ಭಗವಂತನು ದಯಪಾಲಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

-ಭಂಡಾರಿ ವಾರ್ತೆ 

Leave a Reply

Your email address will not be published. Required fields are marked *