September 19, 2024

ದಕ್ಷಿಣ ಕನ್ನಡ ಜಿಲ್ಲೆಯ ಶಿರ್ತಾಡಿಯ ಶ್ರೀ ಸುರೇಂದ್ರ ಭಂಡಾರಿ ಮತ್ತು ಶ್ರೀಮತಿ ಸವಿತಾ ಭಂಡಾರಿ ದಂಪತಿಯ ಪುತ್ರಿ ಶ್ರಾವ್ಯ ಎಸ್. ಭಂಡಾರಿ ಇವರು 2021-22 ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 567 ಅಂಕಗಳೊಂದಿಗೆ (92.72%) ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಶ್ರಾವ್ಯ ಎಸ್ ಭಂಡಾರಿ ಇವರು ಗುರುಕೃಪ ಸೆಂಟ್ರಲ್ ಸ್ಕೂಲ್ ಬೊಲ್ಯೋಟ್ಟು ಹೊಸ್ಮಾರ್ ಶಾಲೆಯ ವಿದ್ಯಾರ್ಥಿನಿ. ಶ್ರಾವ್ಯ ಎಸ್. ಭಂಡಾರಿ ಇವರು ಶಿಕ್ಷಣದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

Leave a Reply

Your email address will not be published. Required fields are marked *