
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೆರ್ನೆಯ ಶ್ರೀ ಸಂಜೀವ ಭಂಡಾರಿ ಮತ್ತು ಶ್ರೀಮತಿ ಸುಲೋಚನಾ ಭಂಡಾರಿ ದಂಪತಿಯ ಪುತ್ರ ಸೋಹಾನ್ ಇವರು 2021-22 ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 573 ಅಂಕಗಳೊಂದಿಗೆ (91.68%) ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಸೋಹಾನ್ ಭಂಡಾರಿ ಇವರು ಶ್ರೀ ರಾಮಚಂದ್ರ ಹೈಸ್ಕೂಲ್ ಆಯ್ಯೋದ್ಯ ನಗರ ಪೆರ್ನೆ ಶಾಲೆಯ ವಿದ್ಯಾರ್ಥಿ. ಸೋಹಾನ್ ಭಂಡಾರಿ ಇವರು ಶಿಕ್ಷಣದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.