September 20, 2024

ಕುಂದಾಪುರ ತಾಲೂಕು ಶಂಕರನಾರಾಯಣದ ಶ್ರೀ ಶಂಕರ ಭಂಡಾರಿಯವರ ಮೊಮ್ಮಗಳು ಮತ್ತು ಗಿರೀಶ್ ವಿ ಎ ಹಾಗೂ ಪೂರ್ಣಿಮಾ ದಂಪತಿಗಳ ಪುತ್ರಿ ಕು.‌ಆಶ್ರಿತಾ ಜಿ ಇವರು ಈ ವರ್ಷದ SSLC ಪರೀಕ್ಷೆಯಲ್ಲಿ 587 ಅಂಕ ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ತನ್ನ ಅದ್ಯಾಪಕ ವೃಂದ, ಪೋಷಕರು ಮತ್ತು ಊರಿಗೆ ಕೀರ್ತಿಯನ್ನು ತಂದುಕೊಟ್ಟಿರುತ್ತಾರೆ. ಇವರು ಮಾಯಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ವಿಜಯಪುರ ದೇವನಹಳ್ಳಿ ಬೆಂಗಳೂರು ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ. 

ಇವರ ಈ ಅಮೋಘ ಸಾಧನೆಯು ಭಂಡಾರಿ ಸಮಾಜಕ್ಕೆ ಹೆಮ್ಮೆ ತರುವ ವಿಚಾರವಾಗಿದ್ದು , ಇವರನ್ನು ಶ್ಲಾಘಿಸುತ್ತಾ ಇವರ ಮುಂದಿನ ಜೀವನ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಹಾರೈಸುತ್ತದೆ.

ಭಂಡಾರಿ ವಾರ್ತೆ

Leave a Reply

Your email address will not be published. Required fields are marked *